6:42 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

3 ವರ್ಷದ ಬಳಿಕ ಮತ್ತೆ ಹಾರಾಡಲಿದೆ ಜೆಟ್  ಏರ್‌ವೇಸ್‌: ಇದೊಂದು ಭಾವನಾತ್ಮಕ ಕ್ಷಣ ಎಂದ ಸಿಇಒ

09/05/2022, 20:51

ಹೊಸದಿಲ್ಲಿ(reporterkarnataka.com):ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್‌ಗೆ ಗೃಹ ಸಚಿವಾಲಯ ಲೈನ್ ಕ್ಲಿಯರ್ ಮಾಡಿದೆ. ವಾಣಿಜ್ಯ ವಿಮಾನ ಸೇವೆಗಳನ್ನು ನಿರ್ವಹಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ ಅನುಮತಿ ದೊರೆತಿದೆ. ಏಪ್ರಿಲ್ 17, 2019 ರಂದು ಜೆಟ್ ಏರ್‌ವೇಸ್‌ನ ಹಾರಾಟ ಕೊನೆಗೊಂಡಿತ್ತು. ಮೂರು ವರ್ಷಗಳ ನಂತರ ಜೆಟ್ ಏರ್ವೇಸ್ ತನ್ನ ರೆಕ್ಕೆಗಳನ್ನು ಬಿಚ್ಚಿ ಹಾರಾಡತೊಡಗಿದೆ. ಮೇ 5ರಂದು ಜೆಟ್ ಏರ್‌ವೇಸ್ ಹೈದರಾಬಾದ್‌ನಿಂದ ದೆಹಲಿಗೆ ಪರೀಕ್ಷಾರ್ಥ ಹಾರಾಟವನ್ನು ನಡೆಸಿತು.

ಶೀಘ್ರದಲ್ಲೇ ವಾಣಿಜ್ಯ ಸೇವೆಗಳನ್ನು ಪ್ರಾರಂಭಿಸುವುದಾಗಿ ಕಂಪನಿಯ ಸಿಇಒ ಸಂಜೀವ್ ಕಪೂರ್ ಘೋಷಿಸಿದ್ದಾರೆ. ಜೆಟ್ ಏರ್‌ವೇಸ್ ಕುಟುಂಬಕ್ಕೆ ಇದೊಂದು ಭಾವನಾತ್ಮಕ ಕ್ಷಣವಾಗಿದೆ ಎಂದು ವರ್ಣಿಸಿದ್ದಾರೆ. ಮೂರು ವರ್ಷಗಳ ನಂತರ ಜೆಟ್ ಏರ್‌ವೇಸ್‌ನ 2.0 ತನ್ನ ಸೇವೆಗಳನ್ನು ಪ್ರಾರಂಭಿಸಿದ್ದಕ್ಕಾಗಿ ಸಂತೋಷವಾಗಿದೆ. ಆಕಾಶದಲ್ಲಿ ಜೆಟ್ ಅನ್ನು ಮರಳಿ ಪಡೆಯಲು ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

2019ರಲ್ಲಿ ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿತ್ತು. ಹಣಕಾಸಿನ ನೆರವಿನ ಕೊರತೆಯಿಂದಾಗಿ ಜೆಟ್ ಏರ್‌ವೇಸ್ ಅನ್ನು ಮುಚ್ಚುವ ಪ್ರಸ್ತಾಪವಾಯಿತು. ಕೊನೆಗೆ ಮ್ಯಾನೇಜ್ ಮೆಂಟ್ ಕೂಡ ಕೈಕೊಟ್ಟ ಪರಿಣಾಮವಾಗಿ ಅನಿವಾರ್ಯ ಕಾರಣಗಳಿಂದ ಮುಚ್ಚಿದೆವು. ಏಪ್ರಿಲ್ 2019 ರಲ್ಲಿ ಕಂಪನಿ ಮುಚ್ಚುವ ಮೊದಲು 3,500 ರೂ. ಕೋಟಿ ಸಾಲವನ್ನು ಹೊತ್ತುಕೊಳ್ಳಬೇಕಾಯಿತು. ಪ್ರಯಾಣಿಕರ ಟಿಕೆಟ್ ರದ್ದುಗೊಂಡಿದ್ದರಿಂದ ಇನ್ನೂ 3,500 ಕೋಟಿ ರೂ. ಹೆಚ್ಚುವರಿ ಸಾಲದ ಜೊತೆಗೆ ಇತರೆ ಸಾಲ ಸೇರಿ ಒಟ್ಟು 8,500 ಕೋಟಿ ರೂ. ಹೊಡೆತ ಬಿತ್ತು. ಪರಿಣಾಮವಾಗಿ, ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಜೆಟ್ ಏರ್‌ವೇಸ್‌ನ 16,500 ಉದ್ಯೋಗಿಗಳು ರಸ್ತೆಗೆ ಬಿದ್ದರು. ಇದೀಗ ಜೆಟ್‌ ಏರ್‌ವೇಸ್‌ ಪುನಃ ಪ್ರಾರಂಭವಾಗಿರುವುದು ಕಂಪನಿಗೆ ರೆಕ್ಕೆ ಬಂದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು