12:54 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಜಾನ್ ಗೆ ಪ್ರತಿಯಾಗಿ ದೇಗುಲಗಳಲ್ಲಿ ಮೊಳಗಿದ ಸುಪ್ರಭಾತ

09/05/2022, 21:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಆರಂಭವಾಗಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 5.15ಕ್ಕೆ ಮುಸ್ಲಿಮರು ಆಜಾನ್ ಮೊಳಗುವ ವೇಳೆ ಹಿಂದೂಗಳ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗಿದೆ.


ಚಿಕ್ಕಮಗಳೂರು ನಗರದ ಶಂಕರಪುರ ಏರಿಯಾದಲ್ಲಿರುವ ಕೊಂಗಮಾಟಮ್ಮ ದೇವಾಲಯದಲ್ಲಿ ಸುಪ್ರಭಾತ ಮೊಳಗಿದೆ. ಕಳೆದ ರಾತ್ರಿಯೇ ದೇವಾಲಯದ ಮೇಲ್ಭಾಗ ಮೈಕ್ ಕಟ್ಟಿ ಎಲ್ಲಾ ಸಿದ್ಧತೆ ನಡೆಸಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗ್ಗೆ 5.15ಕ್ಕೆ  ಸುಪ್ರಭಾತ ಹಾಕಿದ್ದಾರೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನ, ಕಲ್ದೊಡ್ಡಿ ಶಿವನ ದೇವಸ್ಥಾನ, ವಿಜಯಪುರ ಆಂಜನೇಯ ಸ್ವಾಮಿ ದೇವಸ್ಥಾನ, ನೇಕಾರ ಬೀದಿ ಶ್ರೀರಾಮನ ದೇವಸ್ಥಾನ, ಅಗಸರ ಬೀದಿ ಬನಶಂಕರಿ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗುತ್ತಿದೆ. ಸುಪ್ರಭಾತ ಜೊತೆ ಶ್ರೀರಾಮನ ಭಕ್ತಿ ಗೀತೆ ” ನಿನ್ನೆಗಳ ಪಾಪವ ಸೊನ್ನೆಯಾಗಿಸೋ ರಾಮ” ಎಂಬ ಭಕ್ತಿ ಗೀತೆಯೂ ಮೊಳಗಿದೆ. ಇನ್ನು ಮುಂದೆ ದಿನಕ್ಕೆ ಮೂರು ಬಾರಿ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಕಾರ್ಯಕರ್ತರು ತೀರ್ಮಾನಿಸಿ ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಮುಸ್ಲಿಮರು ನಮಾಜ್ ಕೂಗುವ ವೇಳೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ಸುಪ್ರಭಾತ ಹಾಕಲು ತೀರ್ಮಾನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು