10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ 3 ಮಂದಿ ಬಂಧನ

09/05/2022, 23:40

ಬೆಂಗಳೂರು(reporterkarnataka.com): ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಆರೋಪದ ಮೇಲೆ ಮೂವರು ದುಷ್ಕರ್ಮಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.

ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು