6:19 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಉಡುಪಿ ಜಿಲ್ಲೆಯ ಬೀಚ್ ಜಲಕ್ರೀಡೆ ಬಂದ್; ಸೈಂಟ್ ಮೆರೀಸ್ ಬೋಟ್ ಯಾನ ಸ್ಥಗಿತ

10/05/2022, 10:08

ಉಡುಪಿ(reporterkarnataka.com):
ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಮಲ್ಪೆ ಬೀಚ್‌ ಸಹಿತ ಜಿಲ್ಲೆಯ ವಿವಿಧ ಬೀಚ್‌ಗಳಲ್ಲಿ ಜಲ ಸಾಹಸ ಕ್ರೀಡೆ ಹಾಗೂ ಸೈಂಟ್ ಮೆರೀಸ್ ದ್ವೀಪ ಯಾನವನ್ನು ಜಿಲ್ಲಾಡಳಿತದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಿದೆ.

ಚಂಡಮಾರುತದ ಪ್ರಭಾವದಿಂದಾಗಿ ಜಲ ಕ್ರೀಡೆ ಹಾಗೂ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಲ್ಪೆಯಿಂದ ಬೋಟ್‌ನಲ್ಲಿ ಕರೆದೊಯ್ಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಚಂಡಮಾರುತದ ಪ್ರಭಾವ ತಗ್ಗಿದ ಬಳಿಕ ಮತ್ತೆ ಆರಂಭಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮಲ್ಪೆ ಸಹಿತ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇವರೆಲ್ಲ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ ಹೋಗುತ್ತಿದ್ದಾರೆ. ಆದರೆ ಟೋಲ್ ಗೇಟ್ ಮೂಲಕ ಬಂದವರೆಲ್ಲ ವಾಪಸ್ ಹೋಗುವಾಗ ಸುಂಕ ಕಟ್ಟಲೇ ಬೇಕು.

ಈ ನಡುವೆ ರಾಜ್ಯದ ಪ್ರಥಮ ತೇಲು ಸೇತುವೆ ಎಂಬ ಹೆಗ್ಗಳಿಕೆ ಪಡೆದ ಮಲ್ಪೆ ಬೀಚ್ ಫ್ಲೋಟಿಂಗ್ ಬ್ರಿಡ್ಜ್ ಉದ್ಘಾಟನೆಗೊಂಡ 3 ದಿನಗಳಲ್ಲಿ ಕಳಚಿಕೊಂಡಿಲ್ಲ. ಚಂಡಮಾರುತದಿಂದ ಹಾನಿಯಾಗುವುದನ್ನು ತಪ್ಪಿಸಲು ಸೆಂಟರ್ ಲಾಕ್ ಕಳಚಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿ ನಿರ್ವಹಣಾ ಉಸ್ತುವಾರಿ ಸುದೇಶ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಮಲ್ಪೆಯ ತೇಲುವ ಸೇತುವೆಗೆ ಅಲೆಗಳ ಅಬ್ಬರದಿಂದ ಹಾನಿಯಾಗಿತ್ತು ಎನ್ನಲಾಗಿತ್ತು. ಆದರೆ, ಸೈಕ್ಲೋನ್‌ನಿಂದ ಆಗುವ ಹಾನಿಯನ್ನು ತಪ್ಪಿಸಲು ಉದ್ದೇಶಪೂರ್ವಕವಾಗಿಯೇ ಸೇತುವೆಯ ಬ್ಲಾಕ್‌ಗಳನ್ನು ಕಳಚಲಾಗುತ್ತಿದೆ ಎಂದು ನಿರ್ವಹಣಾ ಸಮಿತಿಯ ಸುದೇಶ್‌ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು