1:01 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

‘ಅಸಾನಿ’ ಚಂಡಮಾರುತ ಅಬ್ಬರ, ಆಂಧ್ರಪ್ರದೇಶ ತತ್ತರ: 10 ವಿಮಾನಗಳ ಹಾರಾಟ ರದ್ದು

10/05/2022, 22:01

ಹೈದರಾಬಾದ್( reporterkarnataka.com) ಅಸಾನಿ ಚಂಡಮಾರುತದ ಅಬ್ಬರ ನೆರೆಯ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ನಿನ್ನೆ ಸಂಜೆ ಬಲವಾದ ಗಾಳಿ ಮಳೆ ಸುರಿದಿದೆ. ಶ್ರೀಕಾಕುಳಂ ಜಿಲ್ಲೆಯ ಕೆಲ ಭಾಗಗಳಲ್ಲಿ ನಿನ್ನೆ ಸಂಜೆ ಭಾರಿ ಗಾಳಿ ಹಾಗೂ ಭಾರೀ ಮಳೆಯಾಗಿದೆ. 10 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.

ಅಸಾನಿ ಚಂಡಮಾರುತದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ ಮತ್ತು ಮುಂಬೈ ಸೇರಿದಂತೆ 10 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ನಿನ್ನೆಯೇ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿತ್ತು. ಕಡಲ ತೀರಗಳಲ್ಲಿ ಮತ್ತಷ್ಟು ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಜೋರಾಗಿದೆ ಹಾಗಾಗಿ ವಿಶಾಖಪಟ್ಟಣಂ ಬೀಚ್‌ಗೆ ಜನರ ಪ್ರವೇಶವನ್ನು ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು