10:48 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ

10/05/2022, 23:39

ಬ್ರಹ್ಮಾವರ(reporterkarnataka.com): ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ 
ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಇವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ಖರ್ಚು ಮಾಡಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಆದರೆ ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ, ಕಳೆದ 6 ತಿಂಗಳಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.

ವ್ಯವಹಾರದಲ್ಲಿನ ನಷ್ಟದಿಂದ ಖಿನ್ನತೆಗೆ ಒಳಗಾಗಿ ಮನನೊಂದ ಇವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು