7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ

10/05/2022, 23:39

ಬ್ರಹ್ಮಾವರ(reporterkarnataka.com): ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ 
ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಇವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ಖರ್ಚು ಮಾಡಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಆದರೆ ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ, ಕಳೆದ 6 ತಿಂಗಳಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.

ವ್ಯವಹಾರದಲ್ಲಿನ ನಷ್ಟದಿಂದ ಖಿನ್ನತೆಗೆ ಒಳಗಾಗಿ ಮನನೊಂದ ಇವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು