2:28 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೈಕ್ ಬಳಸಲು ಅನುಮತಿ ಕಡ್ಡಾಯ: ಧ್ವನಿವರ್ಧಕ ಅಬ್ಬರಕ್ಕೆ ಬ್ರೇಕ್​ ಹಾಕಿದ ಸರಕಾರ

11/05/2022, 08:45

ಬೆಂಗಳೂರು(reporterkarnataka.com):  ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ. ರಾತ್ರಿ10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ.

ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್‌ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.

ಆಜಾನ್​ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್‌ ಚಾಲೀಸಾ ಮೊಳಗಿದೆ. ಆಜಾನ್​ ವರ್ಸಸ್​ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು