7:32 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು