9:08 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು