6:08 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು