7:18 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೊಮ್ಮಾಯಿ -ಶಾ ಭೇಟಿ ಅಂತ್ಯ: ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ; ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಮುಖ್ಯಮಂತ್ರಿ

11/05/2022, 19:28

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ ಬೀಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರ ಜತೆ ನಡೆದ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸಾಗಿದ್ದಾರೆ.

ಬೊಮ್ಮಾಯಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಸಮ್ಮುಖದಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಿದರು. ಎಲ್ಲವನ್ನು ಆಲಿಸಿದ ಅಮಿತ್ ಶಾ ನೀವು ರಾಜ್ಯಕ್ಕೆ ವಾಪಸ್​ ತೆರಳಿ, ನಾವು ಈ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಅಮಿತ್ ಶಾ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ರಾಜಕೀಯ ವಿದ್ಯಮಾನಗಳು, ಸ್ಥಿತಿಗತಿಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ .

ನಿನ್ನೆ ಸುಪ್ರೀಂಕೋರ್ಟ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ನೀಡಿರುವ ಆದೇಶ, ಅದರ ಪರಿಣಾಮಗಳೇನು? ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಸೇರಿದಂತೆ ಎಲ್ಲವೂ ಕೂಡ ಚರ್ಚೆಯಾಗಿದೆ. ನಾವು ಎಲ್ಲವನ್ನೂ ಅವರಿಗೆ ತಿಳಿಸಿದ್ದು, ಸುದೀರ್ಘವಾಗಿ ಕೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. 2-3 ದಿನಗಳ ಬೆಳವಣಿಗೆ ಆಧಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು