5:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

11/05/2022, 19:41

ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು