5:50 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು

11/05/2022, 20:14

ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು