11:38 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

‘ಉಸಿರಿಗಾಗಿ  ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ !

15/06/2021, 19:45

ಮಂಗಳೂರು(reporterkarnataka news):‘ಉಸಿರಿಗಾಗಿ  ಹಸಿರು’ ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ  ಹೆಚ್ಚಿನ  ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆಟ್ಟ ಗಿಡವನ್ನು ಪೋಷಿಸಬೇಕು. ಗಿಡವನ್ನು ಕುಟುಂಬದಂತೆ ನೋಡಬೇಕು. ಈ ಕಾರ್ಯಕ್ಕೆ ಕೈ ಜೋಡಿಸುವವರು  ಆ ದಿನ ಗಿಡ ನೆಟ್ಟವರು ಪರಿಸರಕ್ಕೆ ಮಾಡಿದ ಸೇವೆಯನ್ನು ರಶ್ಮಿ ಉಳ್ಳಾಲ್ ತಂಡಕ್ಕೆ ಕಳುಹಿಸಿಕೊಡಲು ಕರೆ ನೀಡಿದ್ದು, ಇದಕ್ಕೆ ಮಂಗಳೂರಿನಾದ್ಯಂತ ಅತೀವ ಹೆಚ್ಚಿನ ಮಟ್ಟದಲ್ಲಿ ಪ್ರಶಂಸೆಯನ್ನು ಪಡೆದಿರುತ್ತದೆ. 

ಜೂನ್ 8 ರಂದು ರಶ್ಮಿ ಉಳ್ಳಾಲ್ ಅವರ ತಂಡ ತೊಕ್ಕೊಟ್ಟಿನಲ್ಲಿ ಗಿಡ ನೆಡುತ್ತಿದ್ದರೆ, ಇತರ ಪರಿಸರ ಪ್ರಿಯರು ತಮ್ಮ ತಮ್ಮ ಮನೆಯಲ್ಲಿ ಬೆಳಗ್ಗೆ 8.30 ಕ್ಕೆ ಸರಿಯಾಗಿ ಮೂಡಬಿದ್ರಿ, ಕಾರ್ಕಳ, ಕೆಂಜಾರ್ ಬೆಂಗಳೂರು, ಅಳೆದಂಗಡಿ, ಉಳ್ಳಾಲ್ , ಉಡುಪಿ ಕಡೆಯಿಂದ ತಾವು ನೆಟ್ಟ ಗಿಡದ ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ.


ಏಕ ಕಾಲದಲ್ಲಿ ನೂರಾರು ಗಿಡ ನೆಟ್ಟಿರೋದು ಪರಿಸರ ಪ್ರಿಯರಿಗೆ ಖುಷಿ ತಂದಿದೆ.ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮರ ಕಡಿಯುವ ಕಾರ್ಯ ನಡೆಯುತ್ತಾ ಬಂದಿದ್ದು, ಗಿಡ ಬೆಳೆಸುವ ಹಾಗೂ ರಕ್ಷಿಸುವ ಕಾರ್ಯ ಮನೆಯಿಂದ ಆರಂಭ ಆಗಬೇಕು. ಹೀಗೆ ಮಾಡುವುದರಿಂದ  ಜನರಿಗೆ  ಗಿಡ ರಕ್ಷಿಸುವ ಮನೋಭಾವನೆ ಬೆಳೆಯಬಹುಧು ಎನ್ನುವ ಉದ್ದೇಶ  ಉಸಿರಿಗಾಗಿ ಹಸಿರು ತಂಡದ್ದಾಗಿದೆ.
ಇಂತಹ ಸಂದರ್ಭದಲ್ಲಿ ರಶ್ಮಿ ಉಳ್ಳಾಲ್ ಅವರು ತೊಕ್ಕೊಟ್ಟು ಪರಿಸರದಲ್ಲಿ  ತಮ್ಮ ತಂಡದ ಸಹಾಯದಿಂದ 2೦ ಗಿಡ ನೆಡುವ ಹಾಗೂ  ಮನೆಗೊಂದು ಸಸಿಯನ್ನು ವಿತರಿಸುವ ಕಾರ್ಯವನ್ನು ಮಾಡಿದ್ದು ಹೊಳೆ ದಾಸವಾಳ , ಬೇವಿನ ಗಿಡ, ಲಕ್ಷ್ಮಣ ಫಲ, ಮಹಾಗನಿ  10 ಗಿಡವನ್ನು ಮನೆ ಮನೆಗೆ ವಿತರಿಸುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಮಾಧವ್ ಉಳ್ಳಾಲ್ , ಲತೀಶ್ , ಶರತ್ , ನಿತೀಶ್ ನಾಯರ್ , ಪ್ರಥ್ವಿರಾಜ್  ಶೆಟ್ಟಿ, ಶ್ರೀಕಾಂತ್  ,ಶ್ರೀಮಂತ್ ,ಬೃಜೇಶ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು