11:44 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸಂಪುಟ ಸಭೆ ಒಪ್ಪಿಗೆ 

12/05/2022, 23:36

ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಬಾಕಿ ಉಳಿದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಶೀಘ್ರವೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳ್ಳಲಿದೆ.

ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ , ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಗೆ ತರೋದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ನಡೆದಂತ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಾಯ್ದೆ ಕುರಿತಂತೆ ಚರ್ಚಿಸಲಾಯಿತು. ಅಲ್ಲದೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರುವ ಕಡತಕ್ಕೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಶೀಘ್ರವೇ ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು