12:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಸೆಂಟ್ ಸಂಧ್ಯಾ ಕಾಲೇಜು: ಎಂಕಾಂನಲ್ಲಿ ಪ್ರಥಮ ರ‍್ಯಾಂಕ್ ಪಡೆದ ಶೀತಲ್ ನಾಯಕ್ ಗೆ ಸನ್ಮಾನ 

13/05/2022, 22:02

ಮಂಗಳೂರು(reporterkarnataka.com); ಬೆಸೆಂಟ್ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ (ಎಂ.ಕಾಂ) ವಿಭಾಗದ ಶೀತಲ್ ನಾಯಕ್ ಅವರು ಮಂಗಳೂರು ವಿಶ್ವವಿದ್ಯಾನಿಲಯ ೨೦೨೧ ರ ಅಕ್ಟೋಬರ್‌ನಲ್ಲಿ ನಡೆಸಿದ ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದು, ಈ ಹೆಮ್ಮೆಯ ಸಾಧನೆಗಾಗಿ ಕಾಲೇಜಿನ ವತಿಯಿಂದ ಅವರನ್ನು  ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀನಾರಾಯಣ ಭಟ್  ಅವರು ಅತಿಥಿಗಳನ್ನು ಹಾಗೂ ಆಹ್ವಾನಿತರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. 


ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ತಾರಾ ಶೆಟ್ಟಿ  ಅವರು ಶೀತಲ್ ಅವರ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಸಾಧನೆಗಳನ್ನು ಪರಿಚಯಿಸುತ್ತಾ ಅವರು ಶಿಕ್ಷಣದಲ್ಲಿ ಮಾತ್ರವಲ್ಲದೆ ತುಳು ಚಲನಚಿತ್ರಗಳಾದ “ದಬಕ್ ದಬಕ್  ಐಸಾ” ದಲ್ಲಿ ನಾಯಕಿಯಾಗಿ, “ಕುದುಕನ ಮದಿಮೆ”, “ಭೋಜರಾಜ್ ಎಂ.ಬಿ.ಬಿ.ಎಸ್” ಇವುಗಳಲ್ಲಿ ನಟಿಸಿದ್ದಾರೆ ಹಾಗೂ ಅವರು ಮೆಹಂದಿ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆಂಬ ಅಂಶವನ್ನು ತಿಳಿಸಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಸುರೇಶ್ ಪೈ (ಕಾರ್ಯದರ್ಶಿ, ಡಬ್ಲ್ಯು.ಎನ್.ಇ.ಎಸ್)  ಅವರು ಮಾತನಾಡಿ ಶೀತಲ್‌ನ ಸಾಧನೆಯನ್ನು ಅಭಿನಂದಿಸಿದರು. ಮತ್ತೊಬ್ಬ ಅತಿಥಿಗಳಾದ  ಮಣೆಲ್ ಅಣ್ಣಪ್ಪ ನಾಯಕ್,  (ಉಪಾಧ್ಯಕ್ಷರು, ಡಬ್ಲ್ಯು.ಎನ್.ಇ.ಎಸ್)ಮಾತನಾಡಿ, ಶೀತಲ್‌ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಕುಡ್ಪಿ ಜಗದೀಶ್ ಶೆಣೈ (ಅಧ್ಯಕ್ಷರು ಡಬ್ಲ್ಯು.ಎನ್.ಇ.ಎಸ್) ಅವರು ಮಾತನಾಡಿ, ಬೆಸೆಂಟ್ ಸಂಧ್ಯಾ ಕಾಲೇಜಿಗೆ ಕೀರ್ತಿಯನ್ನು ತಂದುಕೂಟ್ಟ ಶೀತಲ್ ರವರ ಸಾಧನೆಗೆ ಅಭಿನಂದಿಸಿ ಹರಸಿದರು. ಮಾತ್ರವಲ್ಲದೆ ಹಗಲು ಹೊತ್ತು ಕೆಲಸ ಕಾರ್ಯಗಳನ್ನು ಮಾಡಿ  ಸಂಜೆ ಕಾಲೇಜಿನಲ್ಲಿ ಓದು ಮುಂದುವರೆಸಿ ವಿಶ್ವವಿದ್ಯಾನಿಲಯದಲ್ಲೇ  ರ‍್ಯಾಂಕ್ ಪಡೆಯುವುದೆಂದರೆ ಬಹಳ ಹೆಮ್ಮೆಯ ವಿಚಾರ ಎಂದು ತಿಳಿಸಿದರು. 

ಸ್ನಾತಕೋತ್ತರ ವಿಭಾಗದ ಹಿಂದಿನ ಮುಖ್ಯಸ್ಥರಾಗಿದ್ದ ಡಾ. ಶ್ರೀಧರ್ ಜೋಯಿಸರು ಹಾಗೂ ಗ್ರಂಥಪಾಲಕರಾದ ಡಾ. ವಾಸಪ್ಪ ಗೌಡರು ಮಾತನಾಡಿ ಶೀತಲ್‌ರವರನ್ನು ಅಭಿನಂದಿಸಿದರು.



ಕಾರ್ಯಕ್ರಮದಲ್ಲಿ ಶ್ರೀ ಎಂ.ಪಿ.ಭಟ್ (ಖಜಾಂಚಿ,
ಡಬ್ಲ್ಯು.ಎನ್.ಇ.ಎಸ್),ಸಂಧ್ಯಾ ಕಾಲೇಜಿನ ಸಂಚಾಲಕಗಣೇಶ ಕೃಷ್ಣಭಟ್
ಜೀವನ್‌ದಾಸ್ ನಾರಾಯಣ್ , ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸ್ನಾತಕ-ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಶ್ರೀಧರ್  ಮಣಿಯಾಣಿ ಇವರು ವಂದಿಸಿದರು.ಸಾತ್ವಿಕಾ ಶೆಟ್ಟಿ, (ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ) ಅವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು