11:18 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ

16/06/2021, 09:39

ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ  ಒತ್ತಾಯಿಸಿದರು.

ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಮರವೂರು ಸೇತುವೆ ದುರಂತ ಸಂಭವಿಸಿದೆ. ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು