5:47 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ

16/06/2021, 09:39

ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ  ಒತ್ತಾಯಿಸಿದರು.

ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಮರವೂರು ಸೇತುವೆ ದುರಂತ ಸಂಭವಿಸಿದೆ. ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು