2:56 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು