9:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು