4:53 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು