8:41 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು