3:31 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ ಪ್ರಯಾಣಿಸಿ 

15/05/2022, 09:06

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಮೇ16ರಿಂದ ಶಾಲಾ-ಕಾಲೇಜುಗಳು  ರಾಜ್ಯಾದ್ಯಂತ
ಆರಂಭಗೊಳ್ಳಲಿದ್ದು, ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆ ಎಸ್ ಆರ್ ಟಿ ಸಿ ನೀಡಿರುವಂತ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತನ್ನ ನಿಗಮದ ಬಸ್ ಗಳಲ್ಲಿ ಸಂಚರಿಸುವಂತೆ ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.

ಇನ್ನೂ ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುತ್ತದೆ. ಆ ನಂತ್ರ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ, ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು