9:53 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮರವೂರು ಹೊಸ ಸೇತುವೆ ಮುಂದಿನ ಫೆಬ್ರವರಿಯೊಳಗೆ ಪೂರ್ಣ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ 

16/06/2021, 09:55

ಮಂಗಳೂರು (reporterkarnataka news): ಮರವೂರು ನೂತನ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿ-67ರಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ ಎಂದರು.

ಈ  ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು   ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನಾಲ್ಕು ಪಥದ ರಸ್ತೆಯ ಟೆಂಡರ್‍ನಲ್ಲಿ ಹಳೆ ಸೇತುವೆಯನ್ನು ದುರಸ್ಥಿ ಪಡಿಸಲು ಯೋಜನೆಯನ್ನು ರೂಪಿಸಲಾಯಿತು.  ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೇಯ ಸೇತುವೆ ದುರಸ್ಥಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ – ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ  ಮರವೂರು ದ್ವಾರದಿಂದ ಪೊರ್ಕೋಡಿ – ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್  – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು