2:40 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು