2:03 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು