7:55 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು