7:54 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು