5:54 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು