10:43 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!?

17/05/2022, 19:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮೇ17ರಂದು ಕೆಲ ಮಕ್ಕಳನ್ನು ಬಳಸಿ ಶಾಲೆ ಸ್ವಚ್ಚತೆ ಮಾಡಿಸಲಾಗಿದೆ. ಶಾಲಾ ಕೊಠಡಿಯ ಮೇಲೆ ಮಕ್ಕಳನ್ನು ಹತ್ತಿಸಿ ಮಾಳಿಗಿ ಮೇಲ್ಭಾಗದಲ್ಲಿದ್ದ, ಭಾರೀ ಗಾತ್ರದ ಸಿಮೆಂಟ್ ತ್ಯಾಜ್ಯದ ಗುಪ್ಪೆಯನ್ನು ತೆರವುಗೊಳಿಸಲು ಮಕ್ಕಳನ್ನು ಬಳಸಲಾಗಿದೆ.   ಮಕ್ಕಳನ್ನು ಕಟ್ಟಡದ ಮೇಲ್ಭಾಗದ ಚಾವಣೆ ಮೇಲೆ ಹತ್ತಲು ತಿಳಿಸಿದ್ದು, ಕಸ ಹಾಗೂ ತ್ಯಾಜ್ಯ ನೀರು ಮತ್ತು ಸಿಮೆಂಟ್ ತ್ಯಾಜ್ಯವನ್ನು ಕೀಳಲು ಸೂಚಿಸಿದ್ದಾರೆ.

ತ್ಯಾಜ್ಯ ತೆಗೆಯಲು ತಾಸು ಗಟ್ಟಲೆ ಮಕ್ಕಳಿಗೆ ಸಾಮಾಗ್ರಿಗಳನ್ನು ನೀಡಿ ತಾಸುಗಟ್ಟಲೆ ಕೆಲಸ ಮಾಡಿಸಲಾಗಿದೆ. ಶಾಲಾ ಬಿಸಿಯೂಟ ಕೋಣೆಯ ಮೇಲ್ಭಾಗದಲ್ಲಿದ್ದ ಕಸ ಹಾಗೂ ತ್ಯಾಜ್ಯ  ಸಿಮೆಂಟ್ ಕಿತ್ತು ತೆಗೆಯಲು, ಅವರಿಗೆ ಸುತ್ತಿಗೆ ಹಾಗೂ ಕಿರಿ ಹಾರೆ ಕೊಟ್ಟು ಕೆಲಕ್ಕೆ ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಸಲಿಗೆ ಪೂಜಾರ ಹಳ್ಳಿ ತಾಂಡ ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯುವರಾಜ ನಾಯಕ ರವರ ಅಜ್ಜಿಯ ತವರು ಊರೆಂದು ತಿಳಿದುಬಂದಿದೆ. ಬಿ.ಇ.ಓರವರ ನಂಟಿರುವ ಗ್ರಾಮದ ಶಾಲೆಯಲ್ಲಿ ಈ ದುರಾವಸ್ತೆ ಜರುಗಿದೆ. ಶಾಲಾವರಣ ದನಗಳ ಕೊಟ್ಟಿಗೆ ರೂಪದಲ್ಲಿದೆ. ಕಸ ತ್ಯಾಜ್ಯದಿಂದ ಶಾಲಾವರಣ ತುಂಬಿದೆ. ಮಳೆ ನೀರು ನಿಂತು ಕೊಚ್ಚೆ ಗುಂಡಿ ನಿರ್ಮಾಣವಾಗಿದೆ. ಆದರೂ ಸಂಬಂಧಿಸಿದವರು ಕ್ರಮ ಜರುಗಿಸಿಲ್ಲ. ಮಕ್ಕಳಿಗೆ ಶಿಸ್ಥಿನೊಂದಿಗೆ ಶಿಕ್ಷಣ ನೀಡಬೇಕಾಗಿರುವ ಗುರುಗಳು, ಅವರೇ ನಿಂತು ಮಕ್ಕಳಿಗೆ ಗಾರೆ ಹಾಗೂ ಕಸ ಮತ್ತು ಸಿಮೆಂಟ್,ತ್ಯಾಜ್ಯ ನೀರು ಬಳಿಯಲು ಬಳಸಿಕೊಂಡಿದ್ದಾರೆ, ಏನೂ ತಿಳಿಯದ ಮಕ್ಕಳಿಗೆ ಶಿಕ್ಷಣ ನೀಡದೇ ಅವರಿಗೆ ಗಾರೆ ಕೆಲದ ತರಬೇತಿ ನೀಡಿದಂತಹ ದೃಶ್ಯ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.ಈ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ಹಾಗೂ ನಾಗರೀಕರಲ್ಲಿ ಕೆಲವರಲ್ಲಿ ಮಾತ್ರ ಪರವಾದ ಅಭಿಪ್ರಾಯವಿದೆ. ಬಹುತೇಕರಲ್ಲಿ ಖಂಡನೀಯ ಅಭಿಪ್ರಾಯ ವ್ಯಕ್ತವಾಗಿದೆ. ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ಶಿಸ್ಥು ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು