7:09 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು