12:27 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು