8:50 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು