5:19 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು