9:51 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು