3:50 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು