1:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆ: ನದಿ ಪಾತ್ರದ ಮರಳು ತೆರವು; ಇ-ಸ್ಯಾಂಡ್ ಆ್ಯಪ್ ಮೂಲಕ ಹೊಯಿಗೆ ಲಭ್ಯ

18/05/2022, 08:33

ಸಾಂದರ್ಭಿಕ ಚಿತ್ರ
ಉಡುಪಿ(reporterkarnataka.com):  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಮರಳು ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಸಲಾಗುತ್ತಿದೆ. 

ಪ್ರಸ್ತುತ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ತಾತ್ಕಾಲಿಕ ಮರಳು ಪರವಾನಿಗೆದಾರರು, ಮರಳು ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಚಾಲಕರು ರೇನ್ ಟಿ4ಯು ಜಿ.ಪಿ.ಎಸ್ ಸಂಸ್ಥೆಯಿAದ ಯುಸರ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಪಡೆದು, ಇ.ಎಮ್ ವಿಷನ್ ಆ್ಯಪ್ ಮೂಲಕ ಮರಳು ಸಾಗಾಣಿಕೆ ವಾಹನಗಳ ಚಲನವಲನಗಳನ್ನು ಹಾಗೂ ಸಾರ್ವಜನಿಕರು, ಕಂದಾಯ, ಪೊಲೀಸ್, ಆರ್.ಟಿ.ಓ ಹಾಗೂ ಇತರೆ ಇಲಾಖೆಗಳು ಸ್ಯಾಂಡಿ ಉಡುಪಿ ಆ್ಯಪ್ ಮೂಲಕ ವಾಹನಗಳ ಚಾಲಕರು ಮರಳು ಸಾಗಾಣಿಕೆ ಮಾಡುವ ಕುರಿತು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 0820-2950088, 2572333 ಹಾಗೂ ಆಪ್‌ನ ಮಾಹಿತಿಗಾಗಿ ರೇನ್ ಟಿ4ಯು ಪ್ರೆöÊ.ಲಿ, ಅಂಬಾಗಿಲು ರಸ್ತೆ, ಪೆರಂಪಳ್ಳಿ, ಉಡುಪಿ, ಮೊಬೈಲ್ ಸಂಖ್ಯೆ: 8310738476, 9611712361, 8050121886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು