2:42 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಟವರಿಗೆ ದರ್ಶನವಾದದ್ದು ಗೋವಾದಲ್ಲಿ ಬಿಕಿನಿ ತೊಟ್ಟ ವಿದೇಶಿ ಮಹಿಳೆಯರು!!

18/05/2022, 10:46

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇರಳದ ತಿರುವನಂತಪುರದಿಂದ ಕರ್ನಾಟಕದ ಕೊಲ್ಲೂರಿಗೆ ಹೊರಟ ಬಸ್ಸೊಂದು ಗೋವಾದ ಸಮುದ್ರ ಕಿನಾರೆಗೆ ತಲುಪಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಾಗೆಂತ ಇದೇನೂ ಚಾಲಕ ರಹಿತ ಅತ್ಯಾಧುನಿಕ ಬಸ್ಸಲ್ಲ. ಚಾಲಕನಿರುವ ಸಾಮಾನ್ಯ ಬಸ್ ಆಗಿದೆ. ಆದರೆ ಇದೆಲ್ಲ ಎಡವಟ್ಟಿಗೆ ಮುಖ್ಯ ಕಾರಣ ಗೂಗಲ್ ಮ್ಯಾಪ್!

ಮೇ 15ರಂದು ಪ್ರಯಾಣಿಕರಿಂದ ತುಂಬಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ದಾರಿ ಮಧ್ಯೆಇನ್ನೊರ್ವ ಚಾಲಕ ಕರ್ತವ್ಯದ ಮೇಲೆ ಬಸ್ ಏರಿದ್ದ. ರಾತ್ರಿ ವೇಳೆಯಲ್ಲಿ ಪ್ರಯಾಣಿಕರೆಲ್ಲ ಗಡದಾಗಿ ನಿದ್ದೆ ಮಾಡಿದ್ದರು. ಬೆಳಿಗ್ಗೆ ಆಗುತ್ತಲೇ ಬಸ್ ಸಮುದ್ರ ಕಿನಾರೆಯಲ್ಲಿತ್ತು. ಯಾತ್ರಾರ್ಥಿಗಳು ಕಣ್ಣುಜ್ಜುತಾ ಕಣ್ಣು ತೆರೆದರೆ ದರ್ಶನವಾಗಿರುವುದು ಮೂಕಾಂಬಿಕೆಯಲ್ಲ. ಬದಲಿಗೆ ಬಿಕಿನಿ ತೊಟ್ಟ ತಿರುಗಾಡುತ್ತಿದ್ದ ವಿದೇಶಿ ಮಹಿಳೆಯರು.

ಕೊಲ್ಲೂರಿಗೆ ಹೊರಟ್ಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್ಸಿಗೆ ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು