9:46 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಟವರಿಗೆ ದರ್ಶನವಾದದ್ದು ಗೋವಾದಲ್ಲಿ ಬಿಕಿನಿ ತೊಟ್ಟ ವಿದೇಶಿ ಮಹಿಳೆಯರು!!

18/05/2022, 10:46

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇರಳದ ತಿರುವನಂತಪುರದಿಂದ ಕರ್ನಾಟಕದ ಕೊಲ್ಲೂರಿಗೆ ಹೊರಟ ಬಸ್ಸೊಂದು ಗೋವಾದ ಸಮುದ್ರ ಕಿನಾರೆಗೆ ತಲುಪಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಾಗೆಂತ ಇದೇನೂ ಚಾಲಕ ರಹಿತ ಅತ್ಯಾಧುನಿಕ ಬಸ್ಸಲ್ಲ. ಚಾಲಕನಿರುವ ಸಾಮಾನ್ಯ ಬಸ್ ಆಗಿದೆ. ಆದರೆ ಇದೆಲ್ಲ ಎಡವಟ್ಟಿಗೆ ಮುಖ್ಯ ಕಾರಣ ಗೂಗಲ್ ಮ್ಯಾಪ್!

ಮೇ 15ರಂದು ಪ್ರಯಾಣಿಕರಿಂದ ತುಂಬಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ದಾರಿ ಮಧ್ಯೆಇನ್ನೊರ್ವ ಚಾಲಕ ಕರ್ತವ್ಯದ ಮೇಲೆ ಬಸ್ ಏರಿದ್ದ. ರಾತ್ರಿ ವೇಳೆಯಲ್ಲಿ ಪ್ರಯಾಣಿಕರೆಲ್ಲ ಗಡದಾಗಿ ನಿದ್ದೆ ಮಾಡಿದ್ದರು. ಬೆಳಿಗ್ಗೆ ಆಗುತ್ತಲೇ ಬಸ್ ಸಮುದ್ರ ಕಿನಾರೆಯಲ್ಲಿತ್ತು. ಯಾತ್ರಾರ್ಥಿಗಳು ಕಣ್ಣುಜ್ಜುತಾ ಕಣ್ಣು ತೆರೆದರೆ ದರ್ಶನವಾಗಿರುವುದು ಮೂಕಾಂಬಿಕೆಯಲ್ಲ. ಬದಲಿಗೆ ಬಿಕಿನಿ ತೊಟ್ಟ ತಿರುಗಾಡುತ್ತಿದ್ದ ವಿದೇಶಿ ಮಹಿಳೆಯರು.

ಕೊಲ್ಲೂರಿಗೆ ಹೊರಟ್ಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್ಸಿಗೆ ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು