5:44 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು