1:07 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು