1:19 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು