2:45 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಗೋಕುಲ ಮಂದಿರ ಬ್ರಹ್ಮಕಲಶೋತ್ಸವ ಸಮಾರೋಪ: ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿ

19/05/2022, 08:49

ಮುಂಬಯಿ(reporterkarnataka.com): ಬಾಂಬ್ ಸೌತ್ ಕನರಾ ಬಾಗ್ಸ್ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ ಸಂಸ್ಥೆಗಳ ಪುನರಾಭಿವೃದ್ಧಿಯೊಂದಿಗೆ ನವೀಕೃತ ಗೋಕುಲ ಮಂದಿರಕ್ಕೆ ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿಯನ್ನಿತ್ತು ಉತ್ಸವಕ್ಕೆ ಮೆರಗು ನೀಡಿದರು.


ಬಳಿಕ ಸಾಯನ್ ಕಿಂಗ್‌ಸರ್ಕಲ್‌ನ ಶ್ರೀ ಷಣ್ಮುಖಾನಂದ ಚಂದ್ರಶೇಖರೇಂದ್ರ ಸರಸ್ವತಿ ಸಭಾಗೃಹದಲ್ಲಿ ಬಿಎಸ್‌ಕೆಬಿ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಅಧ್ಯಕ್ಷತೆಯಲ್ಲಿ ಜರುಗಿದ ಗೋಕುಲ ಬ್ರಹ್ಮಕಲಶೋತ್ಸವ ಸಮಾರೋಪ ಸಮಾರಂಭದ ಸಭಾಕಾರ್ಯಕ್ರಮಕ್ಕೆ ಸಚಿವ ಡಾ| ಭಗತ್‌ ರಾವ್‌ ಚಾಲನೆಯನ್ನಿತ್ತರು. ಉಡುಪಿ ಶ್ರೀ ಪಲಿಮಾರು ಮಠದ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀ ಕ್ಷೇತ್ರ ಕಟೀಲು ಇದರ ಆನುವಂಶಿಕ ಆರ್ಚಕ ವೇ ಮೂ ಆನಂತ ಪದ್ಮನಾಭ ಆಸ್ರಣ್ಣ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಂಡು ಅನುಗ್ರಹಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಭಟ್, ಅಜಂತಾ ಧಾರ್ಮ ಸಂಸ್ಥೆಯ ಉಪಾಧ್ಯಕ್ಷ ಮಧುಸೂದನ ಆಗರ್ವಾಲ್‌, ಚರೀಸ್ಮಾ ಬಿಲ್ಡರ್‌ನ ಕಾರ್ಯಾಧ್ಯಕ್ಷ ಮೂಲ್ಕಿ ಪಡುಮನೆ ಸುಧೀರ್‌ ವಿ.ಶೆಟ್ಟಿ, ಎಸ್‌ಬಿಐ ಲೈನ್ ಇನ್ಸೂರೆನ್ಸ್ ಕಂಪನಿಯ ಕಾರ್ಯನಿರ್ವಹಕ ನಿರ್ದೇಶಕ ಆನಂದ ಪೇಜಾವರ, ಕೆ.ಎಲ್‌ ಕುಂಡಾಂತಯ ಪ್ರಧಾನ ಅಭ್ಯಾಗತರಾಗಿದ್ದು, ಬಿಎಸ್‌ಕೆಬಿ ಉಪಾಧ್ಯಕ್ಷರುಗಳಾದ ವಾಮನ ಹೊಟ್ಟೆ ಮತ್ತು ಶೈಲಿನಿ ರಾವ್, ಕೋಶಾಧಿಕಾರಿ ಸಿಎ ಹರಿದಾಸ ಭಟ್, ಜೊತೆ ಕಾರ್ಯದರ್ಶಿ ಚಿನ್ನಾ ಮೇಲ್ಮನೆ ಮತ್ತು ಜಗದೀಸ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಿಎಸ್‌ಕೆಬಿ ಆಸೋಸಿಯೇಶನ್ ಕಾರ್ಯದರ್ಶಿ ಎ.ಪಿ.ಕೆ ಸೋತಿ, ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ವಿಶ್ವಸ್ಥ ಸದಸ್ಯರುಗಳಾದ ಎ.ಶ್ರೀನಿವಾಸ ರಾವ್, ಬಿ.ರಮಾನಂದ ರಾವ್, ಕೃಷ್ಣ ಆಚಾರ್ಯ, ಎಸ್.ಎಸ್. ಉಡುಪ ಜಮು, ಜೊತೆ ಕಾರ್ಯದರ್ಶಿ ಪಿ.ಸಿ.ಎನ್ ರಾವ್, ಜೊತೆ ಕೋಶಾಧಿಕಾರಿ ಪಿ. ಕುಸುಮಾ ಶ್ರೀನಿವಾಸ್, ಮಹಿಳಾ ವಿಭಾಗಧ್ಯಕ್ಷ ಐ.ಕೆ ಪ್ರೇಮಾ ಎಸ್.ರಾವ್, ವಿಜಯಲಕ್ಷ್ಮೀ ಸುರೇಶ್ ರಾವ್ ಇತರ ಪದಾಧಿಕಾರಿಗಳು, ಸದಸ್ಯರನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು