1:46 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು