8:23 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು