12:38 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು