9:11 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

20/05/2022, 14:37

ಬೆಂಗಳೂರು (reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ನಸುಕಿನ ವೇಳೆ ಹುಸಿ ಬಾಂಬ್ ಬೆದರಿಕೆಯ ಕರೆ ಬಂದಿರುವ ಘಟನೆ ನಡೆದಿದೆ.

ಅನಾಮಧೇಯ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ 

ಎಂದು ಹೇಳಿದ್ದ. ಬೆಳಗಿನ ಜಾವ 3.30ಕ್ಕೆ ಕಾಲ್ ಮಾಡಿದ ವ್ಯಕ್ತಿ ತಕ್ಷಣ ಕಾಲ್ ಕಟ್  ಮಾಡಿದ್ದ. ಇದರಿಂದ ಕೆಲವು ತಾಸು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿತ್ತು. 

ಬಾಂಬ್ ಬೆದರಿಕೆ ಕರೆಯ ವಿಚಾರವನ್ನು ಕಂಟ್ರೋಲ್ ರೂಂ ಪೊಲೀಸರು ಏರ್ ಪೋರ್ಟ್ ಪೊಲೀಸರಿಗೆ ರವಾನಿಸಿದ್ದರು. ತಕ್ಷಣ

ಬಾಂಬ್ ನಿಷ್ಟ್ರಿಯ ದಳದೊಂದಿಗೆ ಪೊಲೀಸರು ಸತತ 2 ತಾಸುಗಳ ಕಾಲ ತಪಾಸಣೆ ನಡೆಸಿದ್ದಾರೆ. 

ಆದರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.ಹೀಗಾಗಿ ಇದೊಂದು ಹುಸಿಬಾಂಬ್ ಕರೆ ಎನ್ನಲಾಗಿದೆ. ಆದರೂ ತೀವ್ರ ಎಚ್ಚರಿಕೆ ವಹಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಚಿಂಚು ತಪಾಸಣೆಯನ್ನು ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು