10:46 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

20/05/2022, 14:37

ಬೆಂಗಳೂರು (reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ನಸುಕಿನ ವೇಳೆ ಹುಸಿ ಬಾಂಬ್ ಬೆದರಿಕೆಯ ಕರೆ ಬಂದಿರುವ ಘಟನೆ ನಡೆದಿದೆ.

ಅನಾಮಧೇಯ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ 

ಎಂದು ಹೇಳಿದ್ದ. ಬೆಳಗಿನ ಜಾವ 3.30ಕ್ಕೆ ಕಾಲ್ ಮಾಡಿದ ವ್ಯಕ್ತಿ ತಕ್ಷಣ ಕಾಲ್ ಕಟ್  ಮಾಡಿದ್ದ. ಇದರಿಂದ ಕೆಲವು ತಾಸು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿತ್ತು. 

ಬಾಂಬ್ ಬೆದರಿಕೆ ಕರೆಯ ವಿಚಾರವನ್ನು ಕಂಟ್ರೋಲ್ ರೂಂ ಪೊಲೀಸರು ಏರ್ ಪೋರ್ಟ್ ಪೊಲೀಸರಿಗೆ ರವಾನಿಸಿದ್ದರು. ತಕ್ಷಣ

ಬಾಂಬ್ ನಿಷ್ಟ್ರಿಯ ದಳದೊಂದಿಗೆ ಪೊಲೀಸರು ಸತತ 2 ತಾಸುಗಳ ಕಾಲ ತಪಾಸಣೆ ನಡೆಸಿದ್ದಾರೆ. 

ಆದರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.ಹೀಗಾಗಿ ಇದೊಂದು ಹುಸಿಬಾಂಬ್ ಕರೆ ಎನ್ನಲಾಗಿದೆ. ಆದರೂ ತೀವ್ರ ಎಚ್ಚರಿಕೆ ವಹಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಚಿಂಚು ತಪಾಸಣೆಯನ್ನು ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು