2:32 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು